ಮಂಡ್ಯ: ಶೀಳನೆರೆ ಹೋಬಳಿಯ ಶಿವಪುರ ಗ್ರಾಮದಲ್ಲಿ ಸಿಡಿಲು ಬಡಿದು ಓರ್ವ ರೈತ ಮೃತಪಟ್ಟಿರುವ ಘಟನೆ ನಡೆದಿದೆ. ಶಿವಪುರ ಗ್ರಾಮದ 60 ವರ್ಷದ ಪಾಪಣ್ಣ ಮೃತ ರೈತರಾಗಿದ್ದಾರೆ.
ಭಾನುವಾರ ರಾತ್ರಿ ಸುರಿದ ಕುಂಭದ್ರೋಣ ಮಳೆಯಿಂದಾಗಿ ಸುಮಾರು 9 ಗಂಟೆಯ ಸಮಯದಲ್ಲಿ ಬಡಿದ ಸಿಡಿಲಿಗೆ ಪಾಪಣ್ಣ ಅವರು ಮೃತಪಟ್ಟಿದ್ದಾರೆ. ಅದೇ ಮನೆಯಲ್ಲಿದ್ದ 40 ವರ್ಷದ ನಾಗರಾಜು ಹಾಗೂ ಮೊಮ್ಮಗಳು 7 ವರ್ಷದ ಶ್ರೇಯಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನ ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತು ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.