ಪ್ರಜಾಸ್ತ್ರ ಸುದ್ದಿ
ಕೃಷ್ಣರಾಜಪೇಟೆ: ತುಂಡಾಗಿ ಬಿದ್ದ ವಿದ್ಯುತ್ ತಂತಿ ತಗುಲಿ ರೈತನೋರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಬೂಕನಕೆರೆ ಹೋಬಳಿಯಲ್ಲಿ ನಡೆದಿದೆ. ಕಾಳೇಗೌಡನಕೊಪ್ಪಲು ಗ್ರಾಮದ ರೈತ ಗೋವಿಂದೇಗೌಡ (46) ಮೃತ ದುರ್ದೈವಿ.
ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತಂತಿ ಮೇಲೆ ಕಾಲಿಟ್ಟಿದ್ದಾರೆ. ಇದರಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಗಂಡು ಹಾಗೂ ಓರ್ವ ಹೆಣ್ಣು ಮಗಳನ್ನು ಅಗಲಿದ್ದಾರೆ.