ಅಥಣಿ: ತಾಲೂಕಿನ ನಂದೇಶ್ವರ ಗ್ರಾಮದ 50 ವರ್ಷದ ಸಂಗಪ್ಪ ಬಸಪ್ಪ ಯಲ್ಲಟ್ಟಿ ಅನ್ನೋ ರೈತ, ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಹಿಂದೆ 2019 ರ ಆಗಸ್ಟ್ ತಿಂಗಳಲ್ಲಿ ಭೀಕರ ಪ್ರವಾಹ ಬಂದಾಗ 6 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು, ವಾಸಿಸುವ ಮನೆ ಮುಳುಗಿ ಸಂಪೂರ್ಣ ನಾಶವಾಗಿತ್ತು. ಹೀಗಾಗಿ ಸಾಲ ಮಾಡಿದ್ದ.
ಸಿಂಡಿಕೇಟ್ ಬ್ಯಾಂಕ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ , ಸ್ಥಳೀಯ ಸಹಕಾರಿ ಸಂಘದಲ್ಲಿ ಸಾಲ ಹಾಗೂ ಕೈಗಡ ಸೇರಿ 5 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದನಂತೆ. ಇದನ್ನ ತೀರಿಸಲು ಆಗದೆ ಮುಂದೇನು ಅನ್ನೋ ಚಿಂತೆಯಲ್ಲಿ ಮನೆಯಲ್ಲಿ ಯಾರು ಇಲ್ಲದ ಟೈಂನಲ್ಲಿ ನೇಣಿಗೆ ಶರಣಾಗಿದ್ದಾನೆ.
ಮೃತ ರೈತ ಇಬ್ಬರು ಗಂಡು ಮಕ್ಕಳು ಹಾಗೂ ಪತ್ನಿಯನ್ನ ಅಗಲಿದ್ದಾರೆ. ಅಥಣಿ ತಹಶೀಲ್ದಾರ್ ಕಾರ್ಯಾಲಯದ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.