ಪ್ರಜಾಸ್ತ್ರ ಸುದ್ದಿ
ಸಿಂದಗಿ: ಮಳೆಯಿಂದಾಗಿ ಬೆಳೆ ಹಾನಿಯಾದ ಪರಿಣಾಮ ಮನನೊಂದು ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. 32 ವರ್ಷದ ಭೀಮಾಶಂಕರ ಮಾಶಾಳ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ.
ಮನೆಯ ಮಹಡಿಯ ಕೋಣೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೊಲದಲ್ಲಿ ಬಿತ್ತಿದ ಹತ್ತಿ, ಮೆಣಸಿನ ಕಾಯಿ ಬೆಳೆ, ಮಳೆ ಹೆಚ್ಚಾಗಿ ಬೆಳೆ ಹಾಳಾಗಿರುವುದ್ರಿಂದ ಮನನೊಂದು ಹೀಗೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗ್ತಿದೆ.
ದೇವರನಾವದಗಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಸೋಸಾಯಟಿ ಹಾಗೂ ಖಾಸಗಿ ಸಾಲ ಹೊಂದಿದ್ದ ಎನ್ನಲಾಗ್ತಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.