ಪ್ರಜಾಸ್ತ್ರ ಸುದ್ದಿ
ಸಿಂದಗಿ: ಮರಕ್ಕೆ ನೇಣು ಹಾಕಿಕೊಂಡು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೂದಿಹಾಳ ಪಿ.ಎಚ್ ಗ್ರಾಮದಲ್ಲಿ ನಡೆದಿದೆ. ಮಲ್ಲೇಶಪ್ಪ ಬಿರಾದಾರ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ.
ಜಮೀನಿನಲ್ಲಿ ಬೆಳೆದಿರುವ ತೊಗರಿ ಬೆಳೆ ನಾಶ ಹಿನ್ನಲೆ ಮನನೊಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಮೃತ ರೈತ ಕೆವಿಜಿ ಬ್ಯಾಂಕ್ನಲ್ಲಿ ಸುಮಾರು 3.5 ಲಕ್ಷ ಸಾಲ ಮಾಡಿಕೊಂಡಿದ್ದನಂತೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.