ಸಾಲದ ಕುಣಿಕೆಗೆ ರೈತ ಬಲಿ

249

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಸಾಲ ತೀರಿಸಲು ಆಗದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಡಬಾಳ ಗ್ರಾಮದಲ್ಲಿ ನಡೆದಿದೆ. ಸಿದ್ದಪ್ಪ ಯಮನಪ್ಪ ಮಾಡಬಾಳ(48) ಅನ್ನೋ ರೈತ ಮೃತ ದುರ್ದೈವಿಯಾಗಿದ್ದಾನೆ.

ಗ್ರಾಮದ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನಲ್ಲಿ 4 ಲಕ್ಷದ 3 ಸಾವಿರ ಹಾಗೂ ಕೈಗಡವಾಗಿ 2 ಲಕ್ಷ ರೂಪಾಯಿ ಸಾಲ ಮಾಡಿದ್ದಾನೆ. ಇದನ್ನು ತೀರಿಸಲು ಆಗದೆ ಮನನೊಂದು, ಭೀಮನಗೌಡ ಬಿರಾದಾರ ಎಂಬುವರ ಹೊಲಕ್ಕೆ ಕೆಲಸಕ್ಕೆ ಹೋದಾಗ ಬೇವಿನ ಗಿಡಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!