ಪ್ರಜಾಸ್ತ್ರ ಸುದ್ದಿ
ಸಿಂದಗಿ: ತಾಲೂಕಿನ ಯರಗಲ್ಲ ಗ್ರಾಮದಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಲಬಾಧೆಯಿಂದ ಹೊರ ಬರಲಾಗಿದೆ ಗ್ರಾಮದ 45 ವರ್ಷದ ರೈತ ಮಲಕಪ್ಪ ಜೆಟ್ಟಪ್ಪ ಬಾಗಲಪ್ಪಗೋಳ ಎಂಬಾತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಯರಗಲ್ಲ ಗ್ರಾಮದ ಗ್ರಾಮೀಣ ಬ್ಯಾಂಕಿನಲ್ಲಿ 1 ಲಕ್ಷ ರೂಪಾಯಿ ಹಾಗೂ ಆತನ ತಂದೆ ಹೆಸರಿನಲ್ಲಿ 3 ಲಕ್ಷ ಸಾಲ ಮಾಡಿದ್ದ. ಇದರ ಜೊತೆಗೆ ಊರಿನ ಕೆಲವರ ಬಳ 6 ಲಕ್ಷ ರೂಪಾಯಿ ಸಾಲ ಮಾಡಿದ್ದ ಎಂದು ಹೇಳಲಾಗ್ತಿದೆ. ಅತಿಯಾದ ಮಳೆಯಿಂದಾಗಿ ಬೆಳೆಗಳು ಹಾಳಾಗಿದ್ದು, ಸಾಲು ತೀರಿಸಲು ಆಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ರೈತನಿಗೆ 3 ಜನ ಗಂಡುಮಕ್ಕಳು ಹಾಗೂ ಓರ್ವ ಹೆಣ್ಣು ಮಗಳು ಇದ್ದಾರೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ.