ಪ್ರಜಾಸ್ತ್ರ ಸುದ್ದಿ
ಸಿಂದಗಿ: ತಾಳೆ ಬೆಳೆಗಾರರಿಗೆ ನೀಡಲಾಗಿದ್ದ ಹಲವು ಸೌಲಭ್ಯಗಳನ್ನ ಸರ್ಕಾರ ಹಿಂದಕ್ಕೆ ಪಡೆದಿದೆ. ಇದ್ರಿಂದಾಗಿ ರೈತರಿಗೆ ಸಾಕಷ್ಟು ತೊಂದರೆಯಾಗ್ತಿದೆ. ಈ ಬಗ್ಗೆ ಸಚಿವರು ಕೂಡಲೇ ಗಮನ ಹರಿಸಿ ಸಮಸ್ಯೆ ಬಗೆಹರಿಸಬೇಕು ಎಂದು, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯ್ತು.
ಸಿಂದಗಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಚಿವ ಆರ್.ಶಂಕರ ಅವರಿಗೆ, ಗಬಸಾವಳಗಿ ಗ್ರಾಮದಲ್ಲಿ ತಾಳೆ ಬೆಳೆಗಾರರು ಹಾಗೂ ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಮನವಿ ಸಲ್ಲಿಸಿದ್ದರು.
ಈ ವೇಳೆ ಸಿಂದಗಿ ತಾಲೂಕ ತಾಳೆ ಬೆಳೆಗಾರರ ಸಂಘದ ಅಧ್ಯಕ್ಷ ಎ.ಬಿಹಿರೇಮಠ, ರೈತ ಸಂಘದ ಯುವ ಘಟಕ ರಾಜ್ಯ ಉಪಾಧ್ಯಕ್ಷ ಶಿವಕುಮಾರ ಬಿರಾದಾರ, ರೈತರಾದ ಶಂಕರಗೌಡ ಬಿರಾದಾರ, ಬಾಬುರೆಡ್ಡಿ ಬಿರಾದಾರ, ಶಾಂತಗೌಡ ಬಿರಾದಾರ, ಬಿಜೆಪಿ ಮುಖಂಡರಾದ ಬಂಗಾರೇಪ್ಪಗೌಡ ಬಿರಾದಾರ, ಶಿವಶರಣ ಹೆಳವರ ಸೇರಿ ಅನೇಕರು ಉಪಸ್ಥಿತರಿದ್ದರು.