ರಾಜ್ಯದ ರೈತರ ಬಿಡುಗಡೆಗೆ ಪತ್ರ ಬರೆದ ಸಿಎಂ

119

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಕರ್ನಾಟಕದಿಂದಲೂ ರೈತರು ತೆರಳಿದ್ದಾರೆ. ಈ ವೇಳೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ಕೆಲ ರೈತರನ್ನು ಕಳೆದ ನಾಲ್ಕು ದಿನಗಳ ಹಿಂದೆ ಬಂಧಿಸಲಾಗಿದೆ.

ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕೇಂದ್ರದ ರೈತ ವಿರೋಧಿ ಕಾನೂನು ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಲು ಕರ್ನಾಟಕದ ರೈತರು ಬೆಂಗಳೂರು ಮೂಲಕ ತೆರಳಿದ್ದರು. ಅವರು ಬಂಧಿಸಲಾಗಿದೆ. ಅಲ್ಲದೆ ವಾರಣಾಸಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.

ಸಂವಿಧಾನಬದ್ಧವಾದ ಹಕ್ಕಿನ ಮೂಲಕ ಹೋರಾಟಕ್ಕೆ ಹೊರಟವರನ್ನು ಬಂಧಿಸಲಾಗಿದೆ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು. ಒಂದೊಂದು ಜಾಗದಿಂದ ಮತ್ತೊಂದು ಜಾಗಕ್ಕೆ ಸ್ಥಳಾಂತರ ಮಾಡುತ್ತಾ ಇರಬಾರದು ಎಂದು ಹೇಳಿ ರೈತರ ಬಿಡುಗಡೆಗೆ ಪತ್ರ ಬರೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!