ದೆಹಲಿಯಲ್ಲಿ ರೈತರ ಕಿಚ್ಚು: ಗೃಹ ಸಚಿವ ಶಾ ಸಭೆ

322

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕೇಂದ್ರ ಕೃಷಿ ಕಾಯ್ದೆಗಳನ್ನ ವಿರೋಧಿಸಿ ರೈತರು ನಡೆಸ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಹೀಗಾಗಿ ಸರ್ಕಾರ ಹಾಗೂ ರೈತರ ನಡುವೆ ದೊಡ್ಡ ಮಟ್ಟದ ಹೋರಾಟ ನಡೆಯುತ್ತಿದೆ. ಹೀಗಾಗಿ ದೆಹಲಿಯಲ್ಲಿ ಅರೆಸೇನಾ ಪಡೆ ನಿಯೋಜಿಸುವಂತೆ ಕೇಂದ್ರ ಗೃಹ ಸಚಿವ ಅಮಿತ ಶಾ ಹೇಳಿದ್ದಾರೆ.

ದೆಹಲಿಯ ಐಟಿಒ ಪ್ರದೇಶದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿರುವ ಜನರನ್ನ ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಹೀಗಾಗಿ ಪ್ಯಾರಾ ಮಿಲಿಟರಿ ಪಡೆಯನ್ನ ನಿಯೋಜಿಸಬೇಕು ಎಂದಿದ್ದಾರೆ. ಅಮಿತ ಶಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದೆಹಲಿಯಲ್ಲಿ ಸೂಕ್ತ ಭದ್ರತೆ ಒದಗಿಸಲು ಸೂಚನೆ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!