ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಬೃಹತ್ ಹೋರಾಟ ಮಾಡ್ತಿದ್ದಾರೆ. ಗಣರಾಜ್ಯೋತ್ಸ ಸಂದರ್ಭದಲ್ಲಿ ಟ್ರ್ಯಾಕ್ಟರ್ ಪರೇಡ್ ಸಹ ದೇಶ್ಯಾದ್ಯಂತ ನಡೆಸಲಾಗ್ತಿದೆ. ಇದರ ಬಗ್ಗೆ ಮಾತ್ನಾಡಿರುವ ಸಿಎಂ ಬಿ.ಎಸ್ ಯಡಿಯೂರಪ್ಪ, ನಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ರೈತ ಮುಖಂಡರು ಪ್ರತಿಭಟನೆ ಮಾಡುತ್ತಿದ್ದಾರೆ ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೃಷಿ ಮಸೂದೆ ವಾಪಸ್ ಪಡೆಯಿರಿ ಅನ್ನೋದು ರೈತರ ಆಗ್ರಹ. ಆದ್ರೆ, ಸಿಎಂ ಬಿಎಸ್ವೈ, ಪ್ರತಿಭಟನೆ ಯಾಕೆ ಮಾಡುತ್ತಿದ್ದೇವೆ ಅನ್ನೋದು ಅವರಿಗೆ ಗೊತ್ತಿಲ್ಲ. ಬೇಡಿಕೆ ಏನು ಅನ್ನೋದು ಹೇಳುತ್ತಿಲ್ಲ. ಟ್ರ್ಯಾಕ್ಟರ್ ಮೆರವಣಿಗೆಯಿಂದ ಜನರಿಗೆ ತೊಂದರೆಯಾಗುತ್ತೆ ಎಂದು ಹೇಳಿದ್ದಾರೆ.