‘ದೇಶದ ಎಲ್ಲ ರೈತ ಸಂಘಗಳನ್ನ ಚರ್ಚೆಗೆ ಕರೆಯಬೇಕು’

263

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕೇಂದ್ರದ ವಿವಾದಿತ ಕೃಷಿ ಕಾಯ್ದೆಗಳನ್ನ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲಾಗ್ತಿದೆ. ಪಂಜಾಬ್, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಿಂದ ಲಕ್ಷಾಂತರ ರೈತರು ರಾಷ್ಟ್ರರಾಜಧಾನಿಯಲ್ಲಿ ಭಾರೀ ಪ್ರತಿಭಟನೆ ನಡೆಸಲಾಗ್ತಿದೆ. ಪೊಲೀಸರ ಏಟಿಗೂ, ಜಲಫಿರಂಗಿಗೂ ಅಂಜದ ರೈತರು ತಮ್ಮ ಬೇಡಿಕೆ ಈಡೇರಿಕೆಗೆ ಗಟ್ಟಿಯಾಗಿ ನಿಂತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಂಜಾಬ್ ರೈತ ಸಂಘರ್ಷ ಸಮಿತಿ ಜಂಟಿ ಕಾರ್ಯದರ್ಶಿ ಸುಖವಿಂದರ್ ಸಭರನ್, ಚರ್ಚೆಗೆ ಕರೆಯುವುದಾದ್ರೆ ದೇಶದ ಎಲ್ಲ ರೈತ ಸಂಘಟನೆಗಳನ್ನ ಕರೆಯಲಿ. ಇಲ್ಲದಿದ್ರೆ ನಾವು ಚರ್ಚೆಗೆ ಬರುವುದಿಲ್ಲವೆಂದು ಹೇಳಿದ್ದಾರೆ. ದೇಶದಲ್ಲಿ 500 ರೈತ ಸಂಘಟನೆಗಳಿವೆ. ಇವರು ಕೇವಲ 32 ಸಂಘಟನೆಗಳಿಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಎಂದರು.




Leave a Reply

Your email address will not be published. Required fields are marked *

error: Content is protected !!