ಹೆದ್ದಾರಿ ಬಂದ್ ಗೆ ಸಿಗ್ಲಿಲ್ಲ ಸ್ಪಷ್ಟ ಬೆಂಬಲ: ಸೋಮವಾರದ ಕಥೆ ಏನು?

316

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಮಸೂದೆಗಳನ್ನ ಖಂಡಿಸಿ ದೇಶದಲ್ಲಿ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಅದೆ ರೀತಿ ರಾಜ್ಯದಲ್ಲಿ ಸಹ ರೈತ ಸಂಘಟನೆಗಳಿಂದ ದೊಡ್ಡ ಮಟ್ಟದ ಹೋರಾಟ ನಡೆಯುತ್ತಿದೆ. ಅದರ ಭಾಗವಾಗಿ ಇಂದು ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಯ್ತು. ಆದ್ರೆ, ಇದಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹೌದು ರಾಜ್ಯದಲ್ಲಿ ಇಂದು ರೈತ ಸಂಘಟನೆಗಳು ಹೆದ್ದಾರಿ ಬಂದ್ ನಡೆಸಿದ್ವು. ರೈತ ಸಂಘ, ಹಸಿರು ಸೇನೆ ಸೇರಿದಂತೆ ರೈತಪರ ಸಂಘಟನೆಗಳು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ನಡೆಸಿದ್ವು. ಎಲ್ಲವೂ ಬಂದ್ ಆಗುತ್ತೆ ಎಂದು ದೊಡ್ಡ ಸುದ್ದಿಯಾಗಿತ್ತು. ಆದ್ರೆ, ಇದಕ್ಕೆ ಜನರು ಸರಿಯಾಗಿ ಸ್ಪಂದಿಸಿಲ್ಲ. ಇದ್ರಿಂದಾಗಿ ಎಂದಿನಂತೆ ವಾಹನಗಳ ಸಂಚಾರವಾಗಿದೆ.

ಇನ್ನು ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಇದು ಎಷ್ಟರ ಮಟ್ಟಿಗೆ ಸಕ್ಸಸ್ ಆಗುತ್ತೆ ಅನ್ನೋ ಪ್ರಶ್ನೆ ಮೂಡಿದೆ. ಯಾಕಂದ್ರೆ, ಕರೋನಾ ಲಾಕ್ ಡೌನ್ ನಿಂದಾಗಿ ಜನರು ಸಾಕಷ್ಟು ನೋವು ಅನುಭವಿಸಿದ್ದು, ಇದರಿಂದ ಇನ್ನೂ ಹೊರ ಬಂದಿಲ್ಲ. ಆಗ್ಲೇ ಬಂದ್ ಅಂದ್ರೆ ಎಷ್ಟರ ಮಟ್ಟಿಗೆ ಸ್ಪಂದಿಸ್ತಾರೆ ಅನ್ನೋ ಪ್ರಶ್ನೆ ಮೂಡಿದ್ದು, ಇದಕ್ಕೆ ಸೋಮವಾರ ಸಂಜೆ ಉತ್ತರ ಸಿಗಲಿದೆ.




Leave a Reply

Your email address will not be published. Required fields are marked *

error: Content is protected !!