ದನಕರುಗಳೊಂದಿಗೆ ಹುನಗುಂದಲ್ಲಿ ರೈತರ ಪ್ರತಿಭಟನೆ

449

ಪ್ರಜಾಸ್ತ್ರ ಸುದ್ದಿ

ಹುನಗುಂದ: ಬೆಂಬಲ ಬೆಲೆಯಲ್ಲಿ ತೊಗರಿ ಬೆಳೆ ಖರೀದಿಸುವ ಕೇಂದ್ರವನ್ನು ಪುನಃ ಪ್ರಾರಂಭಿಸಬೇಕು ಹಾಗೂ ಕಡಲೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ನೋಂದಣಿ ಹಾಗೂ ಖರೀದಿಗೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ದನಕರುಗಳೊಂದಿಗೆ ತಾಲೂಕು ಆಡಳಿತ ಸೌಧದ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ. ತಮಗೆ ನ್ಯಾಯ ಸಿಗುವ ತನಕ ಹೋರಾಟವನ್ನು ಹಂತ ಹಂತವಾಗಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬರುತ್ತಾರೆ. ಹೆಂಡ್ತಿ, ಮಕ್ಕಳನ್ನು ಕರೆದುಕೊಂಡು ಬಂದು ಪ್ರತಿಭಟನೆ ಮಾಡಲಾಗುವುದು. ಕೂಡಲೇ ನಮ್ಮ ಮನವಿಗೆ ಸ್ಪಂದಿಸದೆ ಹೋದರೆ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!