ಪ್ರಜಾಸ್ತ್ರ ಸುದ್ದಿ
ಬಳ್ಳಾರಿ: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ರದ್ದಗೊಳಿಸುವಂತೆ ನಡೆಸುತ್ತಿರುವಂತಹ ಹೋರಾಟಕ್ಕೆ ಬಂಬಲ ಸೂಚಿಸಿ ಇಂದು ಭಾರತ್ ಬಂದ್ ಗೆ ಕರೆ ಕೊಡಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ನೀಡಿದ ಕರೆಗೆ ಬಳ್ಳಾರಿಯಲ್ಲಿ ಬೆಂಬಲ ವ್ಯಕ್ತವಾಗಿದೆ. ವಿವಿಧ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ.
ರಾಯಲ್ ಸರ್ಕಲ್ ಬಳಿ ಸೇರಿದ ವಿವಿಧ ಸಂಘಟನೆಗಳ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ರಸ್ತೆಗಿಳಿದ ಬಸ್, ಕಾರ್, ಬೈಕ್ ಗಳ ಸವಾರರಲ್ಲಿ ಮನವಿ ಮಾಡಿಕೊಳ್ಳುವ ಮೂಲಕ ಬಂದ್ ಗೆ ಬೆಂಬಲ ನೀಡಿ ಎಂದು ಮನವಿ ಮಾಡಿದರು. ಹೀಗಾಗಿ ಹಲವು ಕಡೆ ಬ್ಯಾರಿಕೇಡ್ ಹಾಕಿದರು.