ರೈತ ಪರ, ಕಾರ್ಮಿಕ ಪರ ಸಂಘಟನೆಗಳಿಂದ ಪ್ರತಿಭಟನೆ

225

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ಇಂದು ಭಾರತ್ ಬಂದ್ ಗೆ ಕರೆ ನೀಡಲಾಗಿತ್ತು. ಹೀಗಾಗಿ ಪಟ್ಟಣದಲ್ಲಿ ವಿವಿಧ ರೈತ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿ ಸೇರಿದ ಹೋರಾಟಗಾರರು, ರೈತ ವಿರೋಧಿ ಮಸೂದೆ ಹಿಂದಕ್ಕೆ ಪಡೆಯಬೇಕೆಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು. ರೈತ ವಿರೋಧಿ ಕಾನಾನೂಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಈ ವೇಳೆ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಧರೆಪ್ಪಗೌಡ ಬಿರಾದಾರ, ಸಂತೋಷ ಬಸಗೊಂಡ, ದೌಲತ್ರಾಯ ಬಿರಾದಾರ, ಶ್ರೀಶೈಲ ಪಾಟೀಲ, ಧರ್ಮಣ್ಣ ಎಂಟಮಾನ, ಅಣ್ಣಾರಾಯ ಇಳಗೇರ, ಸಿದ್ರಾಮಪ್ಪ ರಂಜುಣಗಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!