ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೇಂದ್ರದ ಮೂರು ಕೃಷಿ ಮಸೋದೆಗಳನ್ನ ವಿರೋಧಿಸಿ ಪಂಜಾಬ್, ಹರಿಯಾಣ ಸೇರಿದಂತೆ ಇತರೆ ರಾಜ್ಯಗಳ ರೈತರು ನಿರಂತರವಾಗಿ ಪ್ರತಿಭಟನೆ ನಡೆಸಿಕೊಂಡು ಬರ್ತಿದ್ದಾರೆ. ಭಾನುವಾರದಿಂದ ದೆಹಲಿಯಲ್ಲಿ ಬೃಹತ್ ಹೋರಾಟ ನಡೆಯುತ್ತಿದೆ. ಇದಕ್ಕೆ ರಾಜ್ಯದಲ್ಲಿಯೂ ಬೆಂಬಲ ವ್ಯಕ್ತವಾಗಿದೆ.
ನಗರದ ಮೌರ್ಯ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಬಳಿಕ ಇಂದು ಸಾಂಕೇತಿಕ ಹೋರಾಟ ನಡೆಸಲು ಮುಂದಾಗಿದ್ದಾರೆ. ರೈತ, ಕಾರ್ಮಿಕ ಹಾಗೂ ದಲಿತ ಪರ ಸಂಘಟನೆಗಳು ಸೇರಿಕೊಂಡು ಪ್ರತಿಭಟನೆಗೆ ಮುಂದಾಗಿದ್ದಾರೆ. ಇದರ ಜೊತೆಗೆ ಡಿಸೆಂಬರ್ 7ರಂದು ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಡಿಸೆಂಬರ್ 7ರಿಂದ 15ರ ವರೆಗೆ ನಡೆಯುವ ಅಧಿವೇಶನದ ವೇಳೆ ಪ್ರತಿಭಟನೆ ನಡೆಸಲು ಈ ಎಲ್ಲ ಸಂಘಟನೆಗಳು ನಿರ್ಧಾರ ಮಾಡಿವೆ.