ಸಣ್ಣ ವಿಚಾರಕ್ಕೆ ಅಪ್ಪ-ಮಗನ ಜಗಳ: ಮಗನಿಗೆ ಬೆಂಕಿ ಹಚ್ಚಿದ ತಂದೆ

250

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಅಪ್ಪ ಹಾಗೂ ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಅದು ಕೊನೆಯಲ್ಲಿ ಅನಾಹುತವೊಂದಕ್ಕೆ ಕಾರಣವಾಗಿದೆ. ಸಿಟ್ಟಿಗೆದ್ದ ತಂದೆ ಮಗನಿಗೆ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಜಪ್ಪಿನೊಗರು ಗ್ರಾಮದ ಕೊಪ್ಪರಿಗೆಗುತ್ತು ನಿವಾಸಿ ವಿಶ್ವನಾಥ ಶೆಟ್ಟಿ ಹಾಗೂ ಮಗ ಸ್ವಾಮಿತ ಶೆಟ್ಟಿ ನಡುವೆ, ಹಸುಗಳನ್ನ ಹೊರಗೆ ಕಟ್ಟಿದ್ದ ವಿಚಾರಕ್ಕೆ ಜಗಳವಾಗಿದೆ. ಅದು ವಿಕೋಪಕ್ಕೆ ಹೋಗಿದೆ. ಆಗ ತಂದೆ ವಿಶ್ವನಾಥ ಶೆಟ್ಟಿ, ಮಗನನ್ನ ರೂಮಿನ ಒಳಗೆ ಹಾಕಿ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾನೆ.

ಸುಟ್ಟು ಗಾಯಗಳಾಗಿರುವ ಸ್ವಾಮಿತ ಶೆಟ್ಟಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!