ರಾಜ್ಯದಲ್ಲಿ ಮರ್ಯಾದಾಗೇಡು ಹತ್ಯೆ

173

ಪ್ರಜಾಸ್ತ್ರ ಸುದ್ದಿ

ಬಳ್ಳಾರಿ: ಬೇರೆ ಜಾತಿ ಯುವಕನೊಂದಿಗೆ ಮಗಳು ಸಂಬಂಧ ಬೆಳೆಸಿದ್ದಾಳೆ ಅನ್ನೋ ಕಾರಣಕ್ಕೆ ತಂದೆಯೇ ಮಗಳನ್ನು ನೀರಿಗೆ ತಳ್ಳಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕುಡಿತಿನಿ ಎಂಬಲ್ಲಿ ನಡೆದಿದೆ. ಆರೋಪಿ ಓಂಕಾರಗೌಡ ಪೊಲೀಸ್ ಠಾಣೆಗೆ ಬಂದು ಮಗಳನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನಂತೆ.

ಮಗಳನ್ನು ಸಿನಿಮಾಗೆ ಕರೆದುಕೊಂಡು ಹೋಗುತ್ತೇನೆ ಎಂದು ಮನೆಯಿಂದ ಹೋಗಿದ್ದಾನೆ. ಸಿನಿಮಾ ಶುರುವಾಗಿದೆ ಅಂತಾ ಹೇಳಿ ದೇವಸ್ಥಾನಕ್ಕೆ ಹೋಗಿದ್ದಾರೆ. ಅಲ್ಲಿಯ ಹೈಲ್ ವೆಲ್ ಕಾಲುವೆಗೆ ಮಗಳನ್ನು ತಳ್ಳಿದ್ದಾನಂತೆ. ಅಕ್ಟೋಬರ್ 31ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.




Leave a Reply

Your email address will not be published. Required fields are marked *

error: Content is protected !!