ಪ್ರಜಾಸ್ತ್ರ ಸುದ್ದಿ
ಸಿಂದಗಿ: ಪ್ರತಿಯೊಬ್ಬರಿಗೂ ತಮ್ಮ ಅಪ್ಪನೇ ಮೊದಲ ಹೀರೋ, ಅಪ್ಪ ಜೊತೆಗಿದ್ದರೆ ಸಾಕು ಪ್ರಪಂಚದಲ್ಲಿ ಏನು ಬೇಕಾದರೂ ಸಾಧಿಸುತ್ತೇನೆ ಎಂಬ ವಿಶ್ವಾಸವಿರುತ್ತದೆ ಎಂದು ಕ್ರಿಯೇಟಿವ್ ಕಿಡ್ಸ್ ಹೋಮ್ದ ಮುಖ್ಯಸ್ಥೆ ಡಾ.ಜ್ಯೋತಿ ಪೂಜಾರ ಹೇಳಿದರು.
ಪಟ್ಟಣದ ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕ್ರಿಯೇಟಿವ್ ಕಿಡ್ಸ್ ಹೋಮ್ ಪೂರ್ವ ಪ್ರಾಥಮಿಕಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡ ವಿಶ್ವ ಅಪ್ಪಂದಿರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳಿಗೆ ಗಾಯವಾದರೆ ಅದಕ್ಕೆ ಬ್ಯಾಂಡೇಜ್ ಹಾಕುವುದು ತಾಯಿಯೇ ಆದರೂ, ಆ ಗಾಯಕ್ಕೆ ಬ್ಯಾಂಡೇಜ್ ಕೊಡಿಸಿ ಮಕ್ಕಳ ಬಗ್ಗೆ ಕಾಳಜಿ ತೋರಿಸುವವನು ತಂದೆ. ಅಪ್ಪನ ಪ್ರೀತಿ, ತ್ಯಾಗವನ್ನು ಸ್ಮರಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್ ೧೮ ರಂದು ಫಾದರ್ಸ್ ಡೇ ಆಚರಿಸಲಾಗುತ್ತದೆ. ಭಾರತದಲ್ಲಿ ಪ್ರತಿ ವರ್ಷ ಜೂನ್ ತಿಂಗಳ ಮೂರನೇ ಭಾನುವಾರದಂದು ಪಾದರ್ಸ್ ಡೇ ಅನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಈ ವೇಳೆ ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಅಧ್ಯಕ್ಷ ರಮೇಶ ಪೂಜಾರ, ಶಿಕ್ಷಕಿಯರಾದ ಅಶ್ವಿನಿ ಲೋಣಿ, ಮಂಗಳಾ ಬಮ್ಮಣ್ಣಿ, ಸಾಧನಾ ಇಮಡೆ, ಗೌರಿ ಪಾಟೀಲ, ಶಾಂತಾ ಮೋಸಲಗಿ, ಅಂಬಿಕಾ ಹೂಗಾರ, ಸಿಬ್ಬಂದಿ ಅಂಬಿಕಾ ಕರಿಶೆಟ್ಟಿ, ಶಶಿಕಲಾ ಪೂಜಾರಿ, ಚಂದ್ರಶೇಖರ ಚೌಧರಿ ಹಾಗೂ ಪಾಲಕರು ಭಾಗವಹಿಸಿದ್ದರು.