ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿವಿಧ ನಗಮ , ಮಂಡಳಿಯಲ್ಲಿನ ಖಾಲಿಯಿರುವ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಶನಿವಾರ ಪರೀಕ್ಷೆ ನಡೆಸಲಾಗಿದೆ. ಈ ವೇಳೆ ಕಲಬುರಗಿಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ 9 ಮಂದಿಯನ್ನು ಬಂಧಿಸಲಾಗಿದೆ. ಇದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ಮಾಜಿ ಸಚಿವ ಅಶ್ವತ್ಥನಾರಾಯಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಬಂಧಿತ ರುದ್ರಗೌಡ ಪಾಟೀಲ ಜೊತೆಗೆ ಸಚಿವ ಪ್ರಿಯಾಂಕ್ ಖರ್ಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಪರೀಕ್ಷೆಯಲ್ಲಿ ಅಕ್ರಮ ನಡೆಸುವುದು ಅವನ ಹವ್ಯಾಸ. ಜಾಮೀನು ಮೇಲೆ ಹೊರ ಬಂದು ಮತ್ತೆ ಅಕ್ರಮ ನಡೆಸಿದ್ದಾನೆ. ಇದಕ್ಕೆ ಸರ್ಕಾರ ಕುಮಕ್ಕು ಕೊಡುತ್ತಿದೆ. ಈ ಹಗರವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೊತ್ತುಕೊಂಡು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.