ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಾದ್ಯಂತ ಜನವರಿ 24ರಂದು ನಡಯಬೇಕಿದ್ದ ಎಫ್ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ. ಅಲ್ದೇ, ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಸಿಸಿಬಿ ಪೊಲೀಸರು 6 ಜನರನ್ನ ಬಂಧಿಸಿದ್ದಾರೆ.
ರಾಚಪ್ಪ, ಚಂದ್ರ ಬಂಧಿತರಾಗಿದ್ದು ಉಳಿದ ನಾಲ್ವರ ಹೆಸರು ತಿಳಿದು ಬಂದಿಲ್ಲ. ಬಂಧಿತರಿಂದ ಪ್ರಶ್ನೆ ಪತ್ರಿಕೆಗಳು, ಮೂರು ವಾಹನ ಹಾಗೂ 24 ಲಕ್ಷ ರೂಪಾಯಿ ನಗದು ಜಪ್ತಿ ಮಾಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಯಬೇಕಿದ್ದ ಎಫ್ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಗ್ಗೆ ಮಾಹಿತಿ ಬಂದಿತ್ತು. ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ ಪಾಟೀಲ ಹೇಳಿದ್ದಾರೆ.