ಪ್ರಜಾಸ್ತ್ರ ಸುದ್ದಿ
ನಟ, ರಾಜಕಾರಣಿ ಉಪೇಂದ್ರ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಎರಡು ಎಫ್ಐಆರ್ ದಾಖಲಾಗಿವೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ. ಎಫ್ಐಆರ್ ದಾಖಲೆ ಸಂಬಂಧ ಪೊಲೀಸರು ಕತ್ರಿಗುಪ್ಪೆಯಲ್ಲಿರುವ ಅವರ ಮನೆಗೆ ಹೋದರೆ ನಟ ಉಪೇಂದ್ರ ನಾಪತ್ತೆ ಎನ್ನಲಾಗುತ್ತಿದೆ.
ಹೌದು, ನಟ ಉಪೇಂದ್ರ ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಗಳನ್ನು ರದ್ದುಗೊಳಿಸಬೇಕು ಎಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಉಪೇಂದ್ರ ಬರೀ ಕ್ಷಮೆ ಕೇಳಿದರೆ ಸಾಲದು. ಅವರ ಬಂಧನವಾಗಬೇಕು. ಅವರಿಗೆ ಸೂಕ್ತ ಕಾನೂನು ಶಿಕ್ಷೆಯಾಗಬೇಕು ಎಂದು ಆಗ್ರಹಿಸಲಾಗುತ್ತಿದೆ. ಹೀಗಾಗಿ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದು, ನಾಪತ್ತೆಯಾಗಿದ್ದಾರಂತೆ. ಪೊಲೀಸರು ಉಪೇಂದ್ರರನ್ನು ಬಂಧಿಸುತ್ತಾರಾ ಅನ್ನೋ ಕುತೂಹಲ ಅಭಿಮಾನಿಗಳಲ್ಲಿ, ಪಕ್ಷದ ಕಾರ್ಯಕರ್ತರಲ್ಲಿ ಮೂಡಿದೆ.