ಅಂಬೇಡ್ಕರ್ ಅವರಿಗೆ ಅವಮಾನ: ವಿಧಾನಸೌಧ ಚಲೋ ಕರಪತ್ರ ಬಿಡುಗಡೆ

428

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಕಳೆದ ಜನವರಿ 26ರಂದು ಗಣರಾಜ್ಯೋತ್ಸವ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ರಾಯಚೂರು ಜಿಲ್ಲಾನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ಬೃಹತ್ ಪ್ರತಿಭಟನೆಗೆ, ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಮುಂದಾಗಿದೆ. ಫೆಬ್ರವರಿ 19ರಂದು ಹೈಕೋರ್ಟ್-ವಿಧಾನಸೌಧ ಚಲೋ ನಡೆಸಲಾಗುತ್ತಿದೆ.

ಹೈಕೋರ್ಟ್-ವಿಧಾನಸೌಧ ಚಲೋ ರ್ಯಾಲಿಯ ಕರಪತ್ರವನ್ನು ದಲಿತ ವಿದ್ಯಾರ್ಥಿ ಪರಿಷತ್ ಘಟಕದಿಂದ ಪಟ್ಟಣದಲ್ಲಿ ಬಿಡುಗಡೆಗೊಳಿಸಲಾಯಿತು. ಈ ವೇಳೆ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಹರ್ಷವಧನ ಪೂಜಾರಿ, ದೇಶದ ಪ್ರತಿಯೊಂದು ವರ್ಗಕ್ಕೂ ನ್ಯಾಯ ಸಿಗುವ ನಿಟ್ಟಿನಲ್ಲಿ ಸಂವಿಧಾನ ಬರೆದಿರುವ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವುದು ಖಂಡನೀಯ. ಕೂಡಲೇ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಸುಮಿತ ಕಕ್ಕಸಗೇರಿ, ತುಳಸಿ ಚಿಕ್ಕಸಿಂದಗಿ, ಶ್ರೀಶೈಲ ಬಸ್ತಿಹಾಳ, ಮಲ್ಲಿಕಾರ್ಜುನ ಮಸರಕಲ್ಲ, ಸಂಗಮೇಶ ಹೊಸಮನಿ ಸೇರಿದಂತೆ ಹಲವರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!