ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿವಿಧ ಕಾರಣಗಳಿಂದಾಗಿ ತೆರವಾದ ರಾಜ್ಯದ ವಿವಿಧ ತಾಲೂಕುಗಳ ಗ್ರಾಮ ಪಂಚಾಯ್ತಿಯ ಸ್ಥಾನಗಳಿಗೆ ಫೆಬ್ರವರಿ 25ರಂದು ಮತದಾನ ನಡೆಯಲಿದೆ. ಈ ಕುರಿತು ಸರ್ಕಾರಿ, ಖಾಸಗಿ ವಲಯ ಹಾಗೂ ಇತರೆ ಕ್ಷೇತ್ರಗಳಲ್ಲಿ ಖಾಯಂ ಹಾಗೂ ದಿನಗೂಲಿ ಆಧಾರದ ಮೇಲೆ ಕೆಲಸ ಮಾಡುತ್ತಿರುವವರಿಗೆ ವೇತನ ಸಹಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಈ ರಜೆಯು ತುರ್ತು ಸೇವೆಯಗಳಲ್ಲಿರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಅವರು ಮತದಾನ ಮಾಡಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಲಾಗಿದೆ. ನಿಗದಿತವಾದಂತೆ ನಾಳೆ ರಾಜ್ಯದ ವಿವಿಧ ತಾಲೂಕುಗಳ ಗ್ರಾಮ ಪಂಚಾಯ್ತಿಗಳ ಖಾಲಿ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.