ರೌಡಿ ಶೀಟರ್ ಬಿಜೆಪಿ ಸೇರ್ಪಡೆಗೆ: ಕಾಂಗ್ರೆಸ್ ವಾಗ್ದಾಳಿ

180

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರೌಡಿ ಶೀಟರ್ ಸೈಲೆಂಟ್ ಸುನೀಲ್ ನಡೆಸಿದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗವಹಿಸಿದ್ದು, ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿರುವ ಹೊತ್ತಿನಲ್ಲಿ, ಮತ್ತೊಬ್ಬ ರೌಡಿ ಶೀಟರ್ ನನ್ನು ಬಿಜೆಪಿಗೇ ಸೇರಿಸಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ರೌಡಿ ಫೈಟರ್ ರವಿ ಎಂಬಾತನನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಈ ವೇಳೆ ಸಚಿವ ಅಶ್ವತ್ಥ್ ನಾರಾಯಣ,  ಎಂಎಲ್ಸಿ ಸಿ.ಪಿ ಯೋಗೇಶ್ವರ್, ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರನ್ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಫೈಟರ್ ರವಿ ಬಿಜೆಪಿ ಸೇರ್ಪಡೆಯಾಗಿದ್ದು, ಇದು ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ವಿರೋಧಕ್ಕೆ ಬಿಜೆಪಿ ಸಹ ಹಲವು ಟ್ವೀಟ್ ಗಳ ಮೂಲಕ ನಿಮ್ಮ ಪಕ್ಷದಲ್ಲಿ ಯಾರೆಲ್ಲ ಇದ್ದಾರೆ, ಯಾರೆಲ್ಲ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಕುಟುಕಿದೆ.




Leave a Reply

Your email address will not be published. Required fields are marked *

error: Content is protected !!