ಪ್ರಜಾಸ್ತ್ರ ಸುದ್ದಿ
ಹಾವೇರಿ: ಅನುಮತಿ ಪಡೆಯದೆ ಕಾಲೇಜಿನಲ್ಲಿ ಮತಯಾಚನೆ ಮಾಡಿದ ಪ್ರಕರಣ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣಕುಮಾರ್ ಪೂಜಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಗಂಗಾಜಲ ತಾಂಡಾ ಹತ್ತಿರ ಇರುವ ಕೆ.ವಿ ಪಾಲಿಟೆಕ್ನಿಕ್ ಮಾತಯಾಚನೆ ಮಾಡಿದ್ದಾರೆ. ಇದರ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.