ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು: ಕೋಮು ದ್ವೇಷದ ಹೇಳಿಕೆ ವಿಚಾರ ಸಂಬಂಧ ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ ವಿರುದ್ಧ ಚುನಾವಣಾ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಡಿದ ಪೋಸ್ಟ್ ಗೆ ಸಂಬಂಧಿಸಿದೆ ಕೇಸ್ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ನೀತಿಸಂಹಿತೆ ಉಲ್ಲಂಘನೆ ಆರ್ ಪಿ ಕಾಯ್ದೆ125 ಹಾಗೂ ಐಪಿಸಿ ಕಾಯ್ದೆ 505(2) ಅಡಿಯಲ್ಲಿ ಏಪ್ರಿಲ್ 26, ಶುಕ್ರವಾರದಂದು ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಲಾಗಿದೆ.