ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅಕ್ರಮವಾಗಿ 74.93 ಕೋಟಿ ಮೌಲ್ಯದ ಆಸ್ತಿ ಗಳಿಕೆ ಆರೋಪದ ಮೇಲೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಸರ್ಕಾರದ ಆದೇಶದಂತೆ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಸಿಬಿಐ ತನಿಖೆ ನಡೆಸುತ್ತಿತ್ತು. ಸಿಬಿಐ ತನಿಖೆಯ ಅನುಮತಿಯನ್ನು ಹಿಂದೆ ಪಡೆದ ರಾಜ್ಯ ಸರ್ಕಾರ, ಲೋಕಾಯುಕ್ತ ತನಿಖೆಗೆ ವಹಿಸುವ ನಿರ್ಧಾರವನ್ನು ನವೆಂಬರ್ 23, 2023ರಂದು ತೆಗೆದುಕೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ದಾಖಲೆಗಳು ಯಾವುದು ಇಲ್ಲ. ಸಿಬಿಐ ಅಧಿಕಾರಿಗಳು 2020ರಲ್ಲಿ ಉಲ್ಲೇಖಿಸಿರುವ ಅಂಶಗಳೇ ನಮ್ಮ ಎಫ್ಐಆರ್ ನಲ್ಲೂ ಇವೆ ಎಂದು ಪೊಲೀಸರು ಹೇಳುತ್ತಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಸಿಬಿಐ ತನಿಕೆ ಅನುಮತಿ ಅವರದೆ ಸರ್ಕಾರ ಹಿಂದಕ್ಕೆ ಪಡೆದಿದೆ. ಆದರೆ, ಇದರಿಂದ ಅವರಿಗೆ ಇನ್ನೂ ಪೂರ್ತಿ ಬಿಡುಗಡೆ ಸಿಕ್ಕಿಲ್ಲ ಎನ್ನುವುದು ಮಾತ್ರ ಸತ್ಯ.