ಪ್ರಜಾಸ್ತ್ರ ಸುದ್ದಿ
ಮಂಡ್ಯ: ರೋಡ್ ಶೋ ವೇಳೆ ಕಲಾವಿದರ ಮೇಲೆ ಹಣ ಎಸೆದ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜೆಎಂಎಫ್ ಸಿ ಕೋರ್ಟ್ ನಲ್ಲಿ ಚುನಾವಣಾಧಿಕಾರಿ ದೂರು ಸಲ್ಲಿಸಿದ್ದರು. ಈ ಕುರಿತು ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಳೆದ ಮಾರ್ಚ್ 28ರಂದು ಬೇವಿನಹಳ್ಳಿಯಲ್ಲಿ ರೋಡ್ ಶೋ ನಡೆಸಲಾಗಿದೆ. ಈ ವೇಳೆ ಡಿ.ಕೆ ಶಿವಕುಮಾರ್ ಹಣ ಎಸೆದಿದ್ದರು. ಎನ್ ಸಿಆರ್ ಬಳಿಕ ತನಿಖೆ ನಡೆಸುವಂತೆ ಕೋರ್ಟ್ ಸೂಚಿಸಿದೆ. ಹೀಗಾಗಿ ಎಫ್ಐಆರ್ ದಾಖಲಾಗಿದೆ.