ಬೆಂಗಳೂರು: ಐಟಿ ಅಧಿಕಾರಿಗಳು ನಡೆಸಿದ ದಾಳಿ ವಿಚಾರಕ್ಕೆ ಸಂಬಂಧಿಸಿದ್ದಂತೆ ಈ ಹಿಂದಿನ ಮೈತ್ರಿ ಸರ್ಕಾರದ ಸಿಎಂ ಆಗಿದ್ದ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕೋರ್ಟ್ ಆದೇಶದಂತೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಎಂಪಿ ಚುನಾವಣೆ ಟೈಂನಲ್ಲಿ ನಡೆದ ಐಟಿ ದಾಳಿ ಖಂಡಿಸಿ ಅಂದಿನ ಮೈತ್ರಿ ಸರ್ಕಾರದ ನಾಯಕರು ಪ್ರತಿಭಟನೆ ನಡೆಸಿದ್ರು. ಇದರ ವಿರುದ್ಧ ಮಲ್ಲಿಕಾರ್ಜುನ ಎಂಬುವವರು ಕೋರ್ಟ್ ನಲ್ಲಿ ಪಿಸಿಆರ್ ದಾಖಲಿಸಿದ್ರು. ಹೀಗಾಗಿ ಕೋರ್ಟ್ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಇದರಲ್ಲಿ ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ ಎ1 ಹಾಗೂ ಸಿದ್ದರಾಮಯ್ಯ ಎ3 ಆರೋಪಿ ಎನ್ನಲಾಗ್ತಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ, ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ, ಡಿ.ಕೆ ಶಿವಕುಮಾರ, ಮುನಿರತ್ನ, ಮಾಜಿ ಸಂಸದ ಶಿವರಾಮೇಗೌಡ, ಮಾಜಿ ಸಚಿವ ಡಿ.ಸಿ ತಮ್ಮಣ್ಣ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.