ಸಿಂದಗಿ ಜೆಡಿಎಸ್ ಅಭ್ಯರ್ಥಿ ಸೇರಿ ಹಲವರ ವಿರುದ್ಧ ಎಫ್ಐಆರ್

334

ಪ್ರಜಾಸ್ತ್ರ ಸುದ್ದಿ

ದೇವರಹಿಪ್ಪರಗಿ: ವಿಜಯಪುರ ಜಿಲ್ಲೆಯ ಸಿಂದಗಿ ಉಪಚುನಾವಣೆಯಲ್ಲಿ ಚಟ್ಟರಕಿ ಗ್ರಾಮದಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದ ಜೆಡಿಎಸ್ ಅಭ್ಯರ್ಥಿ ಹಾಗೂ ಇತರರ ವಿರುದ್ಧ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ್ರು ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಅಲ್ಲದೇ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಟ್ಟರಕಿ ಗ್ರಾಮದ ದಾವಲ್ ಮಲಿಕ್ ದರ್ಗಾದ ಹತ್ತಿರ ಅವಧಿ ಮೀರಿ ಚುನಾವಣೆ ಪ್ರಚಾರ ಹಾಗೂ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಪ್ಲೇಯಿಂಗ್ ಸ್ಕ್ವಾಡ್ ನಂಬರ 12 ಅಧಿಕಾರಿ ರಾಜಶೇಖರ ನೀರಲಗಿ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!