ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕಾಂಗ್ರೆಸ್ ಯುವ ನಾಯಕ, ಸಂಸದ ರಾಹುಲ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ 200 ಮಂದಿ ವಿರುದ್ಧ ಉತ್ತರ ಪ್ರದೇಶದ ಗೌತಮ ಬುದ್ಧ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹತ್ರಾಸ್ ನ 19 ವರ್ಷದ ಯುವತಿಯ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದಂತೆ ಗುರುವಾರ ಪ್ರತಿಭಟನೆ ನಡೆಸಿ, ಕುಟುಂಬಸ್ಥರ ಭೇಟಿಗೆ ಮುಂದಾಗಿದ್ರು. ಆದ್ರೆ, ಕರೋನಾ ಮಾರ್ಗಸೂಚಿ ಅನ್ವಯ ಪಾಲನೆ ಮಾಡಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಅನ್ನೋದು ಸೇರಿದಂತೆ ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿ ದೂರು ದಾಖಲಾಗಿದೆ.
ಇನ್ನು ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿರುವುದ್ರಿಂದ ಪೊಲೀಸ್ ರು ಗಾಯಗೊಂಡಿದ್ದಾರೆ, ಮಹಿಳಾ ಸಬ್ ಎನ್ಸ್ ಪೆಕ್ಟರ್ ಅವರ ಬಟ್ಟೆ ಹರಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಕಾಂಗ್ರೆಸ್ ನಾಯಕರ ಮೇಲಿನ ದೌರ್ಜನ್ಯ ಖಂಡಿಸಿ ದೇಶ್ಯಾದ್ಯಂತ ಪ್ರತಿಭಟನೆ ಮಾಡಲಾಗ್ತಿದೆ.