ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಸಂಬಂಧ, ಕಾಂಗ್ರೆಸ್ ಯುವ ಘಟಕದ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಸೇರಿದಂತೆ 17 ಜನರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಘಟಕದಿಂದ ಹೆಬ್ಬಾಳದಲ್ಲಿ ರಕ್ಷಾ ರಾಮಯ್ಯ ನೇತೃತ್ವದಲ್ಲಿ ಜುಲೈ 12ರಂದು ಪ್ರತಿಭಟನೆ ನಡೆಸಲಾಗಿತ್ತು. ಆದ್ರೆ, ಇದಕ್ಕೆ ಅನುಮತಿ ಪಡೆದಿರಲಿಲ್ಲ. ಅಲ್ದೇ, ಕೋವಿಡ್ ನಿಯಮ ಪಾಲಿಸಿರಲಿಲ್ಲವೆಂದು ಪ್ರಕರಣ ದಾಖಲಿಸಲಾಗಿದೆ.