ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ಕುಂಬಳಗೋಡು ಕೈಗಾರಿಕೆ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಣಾಪಾಯ ಸಂಭವಿಸಿಲ್ಲ. ಆದರೆ, ಸುತ್ತಲಿನ ಜನರಿಗೆ ಭಯದ ವಾತಾವರಣ ಮೂಡಿದೆ.
ದಕ್ಷಿಣ ತಾಲೂಕಿನ ಕುಂಬಳಗೋಡು ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ನಡೆದಿದೆ. ನೋಡು ನೋಡುತ್ತಿದ್ದಂತೆ ಬೆಂಕಿ ಎಲ್ಲೆಡೆ ವ್ಯಾಪಿಸಿಕೊಂಡಿದೆ. ದಟ್ಟವಾದ ಹೊಗೆ ಕಾಣಿಸಿಕೊಂಡು ಜನರು ಭಯಗೊಂಡಿದ್ದಾರೆ. ಬೆಂಕಿ ಹೊತ್ತಿಕೊಂಡಿರುವುದಕ್ಕೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅವಲಹಳ್ಳಿ ಠಾಣೆ ಪೊಲೀಸರು ಈ ಕುರಿತು ತನಿಖೆ ನಡೆಸಿದ್ದಾರೆ.