ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಅನಾಹುತಕ್ಕೆ 8 ಜನರ ಸಾವು

246

ಪ್ರಜಾಸ್ತ್ರ ಸುದ್ದಿ

ಹೈದರಾಬಾದ್: ಅಗ್ನಿ ಅನಾಹುತದಿಂದಾಗಿ 8 ಜನ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾದ ಘಟನೆ ಸಿಕಂದರ್ ಬಾದ್ ನಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ಅನಾಹುತ ಸಂಭವಿಸಿದೆ.

ರುಬಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನ ನೆಲಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಅದು ತೀವ್ರವಾಗಿ ಮೊದಲ ಹಾಗೂ ಎರಡನೇ ಮಹಡಿಗೂ ವ್ಯಾಪಿಸಿ 8 ಜನರ ಜೀವ ಬಲಿಪಡೆದಿದೆ. ಸ್ಥಳೀಯರು ಕೂಡಲೇ ರಕ್ಷಣೆ ಮಾಡಿ ಕೆಲವರನ್ನು ರಕ್ಷಿಸಿದ್ದಾರೆ. ಘಟನೆ ನಡೆದ ವೇಳೆ 25 ಮಂದಿ ಇದ್ದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತೆಲಂಗಾಣ ಗೃಹ ಸಚಿವ ಮೊಹಮ್ಮದ್ ಅಲಿ, ಬೆಂಕಿ ಅನಾಹುತಕ್ಕೆ ಕಾರಣ ಏನೆಂದು ತಿಳಿಯಲು ತನಿಖೆಗೆ ಸೂಚನೆ ನೀಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸಾಧ್ಯವಾದಷ್ಟು ಜನರನ್ನು ಉಳಿಸುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!