ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ: ಮೂವರು ಪೊಲೀಸರ ವಶಕ್ಕೆ

304

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಬಿಎಂಪಿಯ ಗುಣನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿಯಲ್ಲಿ ಬೆಂಕಿ ಅನಾಹುತ ಪ್ರಕರಣ ಸಂಬಂಧ ಮೂವರು ಡಿ ಗ್ರೂಪ್ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಇಬ್ಬರು ಇದ್ದರೂ ಗಾಯಗೊಂಡಿಲ್ಲ. ಹೀಗಾಗಿ ಅನುಮಾನ ಮೂಡಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ಇಬ್ಬರು ಇಂಜಿನಿಯರ್, ಓರ್ವ ಗುಮಾಸ್ತಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಗುಣಮಟ್ಟ ಪರಿಶೀಲಿಸಬೇಕಾದ ಅಧಿಕಾರಿಗಳು ಡಿ ಗ್ರೂಪ್ ಸಿಬ್ಬಂದಿಯಿಂದ ಕೆಲಸ ಮಾಡಿಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಓರ್ವ ಚೀಫ್ ಇಂಜಿನಿಯರ್, ನಾಲ್ವರು ಇಂಜನಿಯರ್ ಸೇರಿ 9 ಜನರು ಗಾಯಗೊಂಡಿದ್ದಾರೆ.

ಬಿಬಿಎಂಪಿ ಕಾಮಗಾರಿಯ ಸತ್ಯಾಸತ್ಯೆಯ ತನಿಖೆ ನಡೆಯುವ ಹೊತ್ತಿನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಹೀಗಾಗಿ ಇದು ರಾಜಕೀಯ ಕೆಸರೆರಚಾಟಕ್ಕೆ ದಾರಿ ಮಾಡಿಕೊಟ್ಟಿದೆ. ಆಡಳಿತರೂಢ ಕಾಂಗ್ರೆಸ್, ವಿಪಕ್ಷ ಬಿಜೆಪಿ ನಾಯಕರ ನಡುವೆ ವಾಗ್ದಾಳಿ ನಡೆದಿದೆ. ಈ ಕುರಿತು ಪೊಲೀಸ್ ತನಿಖೆ ನಡೆದಿದೆ.


TAG


Leave a Reply

Your email address will not be published. Required fields are marked *

error: Content is protected !!