ಮೈಸೂರು-ಧಾರವಾಡ ರೈಲಿನಲ್ಲಿ ಬೆಂಕಿ ಅನಾಹುತ

368

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಮೈಸೂರಿನಿಂದ ಧಾರವಾಡಕ್ಕೆ ಹೊರಟಿದ್ದ ರೈಲಿನಲ್ಲಿ ಶನಿವಾರ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಮಂದಗೆರೆ ಹತ್ತಿರ ರಾತ್ರಿ ಸುಮಾರ 12 ಗಂಟೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ರೈಲಿನ ಮೂರನೇ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಪ್ರಯಾಣಿಕರೆಲ್ಲ ಗೊಂದಲಕ್ಕೆ ಒಳಗಾಗಿದ್ದರು. ಈ ವೇಳೆ ರೈಲಿನಿಂದ ಇಳಿಯುವ ವೇಳೆ ಒಂದಿಷ್ಟು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಕಿ ಅನಾಹುತಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ. ಈ ಘಟನೆಯಿಂದ ರೈಲಿನ ವೇಳೆಯಲ್ಲಿ ವ್ಯತ್ಯಯ ಉಂಟಾಯಿತು.




Leave a Reply

Your email address will not be published. Required fields are marked *

error: Content is protected !!