ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಶ್ರೀರಾಮ್ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಕಿತ್ಕರ್ ಹಾಗೂ ಹಿಂದೂ ರಾಷ್ಟ್ರ ಸೇನಾ ಮುಖಂಡ ಮನೋಜ್ ದೇಸೂಕರ್ ಅವರ ಮೇಲೆ ಶನಿವಾರ ರಾತ್ರಿ ಗುಂಡಿನ ದಾಳಿ ನಡೆದಿದೆ. ಈ ಸಂಬಂಧ 4 ತನಿಖಾ ತಂಡವನ್ನು ರಚಿಸಲಾಗಿದೆ.
ಹಿಂಡಲಗಾ ಕೇಂದ್ರ ಕಾರಾಗೃಹದ ಹತ್ತಿರ ಗುಂಡಿನ ದಾಳಿ ನಡೆಸಲಾಗಿದೆ. ನಗರದಲ್ಲಿ ಈಗ ಎಲ್ಲೆಡೆ ನಾಕಾಬಂದಿ ಹಾಕಲಾಗಿದೆ. ಕಾರಾಗೃಹ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆ ನಡೆದಿದೆ. ಘಟನೆ ಖಂಡಿಸಿ ಶ್ರೀರಾಮ್ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ರಾತ್ರಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ದಾಳಿ ಕೋರರು ಬೈಕ್ ಮೇಲೆ ಬಂದಿದ್ದು ಯಾರು ಎಂದು ಇನ್ನು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಇದು ಹಳೆ ದ್ವೇಷದ ಕಾರಣಕ್ಕೋ, ವೈಯಕ್ತಿಯ ಕಾರಣಕ್ಕೋ ಅಥವ ಮತ್ತೆ ಇನ್ಯಾವ ಕಾರಣಕ್ಕೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿಲ್ಲ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.