ಗುಜರಾತ್ ಬಳಿಕ ಆಂಧ್ರದಲ್ಲಿ ಬೆಂಕಿ ಅನಾಹುತ: 7 ಸಾವು

291

ಪ್ರಜಾಸ್ತ್ರ ಸುದ್ದಿ

ವಿಜಯವಾಡ: ಕಳೆದ ಗುರುವಾರ ಗುಜರಾತನ ಅಹಮದಾಬಾದ್ ನಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ ಸಂಭವಿಸಿ 8 ಮಂದಿ ಸಾವನ್ನಪ್ಪಿದ್ರು. ಇದೀಗ ಆಂಧ್ರದಲ್ಲಿ ಇದೆ ರೀತಿ ಅನಾಹುತ ಸಂಭವಿಸಿ 7 ಮಂದಿ ಸಾವನ್ನಪ್ಪಿದ್ದಾರೆ.

ವಿಜಯವಾಡದಲ್ಲಿರುವ ಕೋವಿಡ್ 9 ಸೆಂಟರ್ ಹೋಟೆಲ್ ನಲ್ಲಿ ಇಂದು ಬೆಳಗ್ಗೆ ಬೆಂಕಿ ಅನಾಹುತ ಸಂಭವಿಸಿದೆ. ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು 7 ಮಂದಿ ಜೀವ ಕಳೆದುಕೊಂಡಿದ್ದಾರೆ. 15 ಮಂದಿಯನ್ನ ರಕ್ಷಿಸಲಾಗಿದೆ. ರಕ್ಷಣೆ ಮಾಡಿದವರನ್ನ ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೋಟೆಲ್ ಒಳಗೆಡೆ ಇನ್ನು ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬಂದಿದ್ದು, ಬೆಂಕಿ ನಂದಿಸುವ ಕೆಲಸ ಮಾಡ್ತಿದ್ದಾರೆ. ಯಾವ ಕಾರಣಕ್ಕೆ ಈ ದುರಂತ ಸಂಭವಿಸಿದೆ ಅನ್ನೋದು ಸಧ್ಯಕ್ಕೆ ತಿಳಿದು ಬಂದಿಲ್ಲ.




Leave a Reply

Your email address will not be published. Required fields are marked *

error: Content is protected !!