ಖೈನೂರು ಗ್ರಾಮದಲ್ಲಿ ಬಣವೆಗೆ ಬೆಂಕಿ ಹಚ್ಚಿದ ಕಿಡಿ‘ಹೇಡಿ’ಗಳು

462

ಸಿಂದಗಿ: ರಾಸುಗಳಿಗೆ ಮುಂದಿನಗಳಲ್ಲಿ ಮೇವು, ಹೊಟ್ಟು ಒದಗಿಸಲು ಸಂಗ್ರಹಿಸಿಟ್ಟಿದ್ದ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ತಾಲೂಕಿನ ಖೈನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪರಮಾನಂದ ದೊಡ್ಡಮನಿ ಎಂಬುವವರಿಗೆ ಸೇರಿದ ಬಣವೆಗೆ ಬೆಂಕಿ ಹಚ್ಚಲಾಗಿದೆ.

ಪತ್ರಾಸ್ ಶೆಡ್ಡಿನಲ್ಲಿ ಸಂಗ್ರಹಿಸಿಟ್ಟಿದ್ದ ಒಣಮೇವು ಹಾಗೂ ಹೊಟ್ಟಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದನ್ನ ನೋಡಿದ ಗ್ರಾಮಸ್ಥರು ತಕ್ಷಣ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದ್ರಿಂದಾಗಿ ದೊಡ್ಡ ಅನಾಹುತ ತಪ್ಪಿದೆ. ಇಲ್ಲದೆ ಹೋದರೆ ಲಕ್ಷಾಂತರ ರೂಪಾಯಿ ಮೌಲ್ಯದ ಒಣಮೇವು, ಹೊಟ್ಟು ಬೆಂಕಿಗೆ ಆಹುತಿಯಾಗಿ ಹೋಗ್ತಿತ್ತು.

ಅಪರಿಚಿತ ಕಡಿಗೇಡಿಗಳ ಕೃತ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಪಿ.ಕೆ ಹುಡೇದ ಭೇಟಿ ನೀಡಿದ್ದಾರೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!