ಬೆಂಕಿ ಅನಾಹುತ: 2 ಹೋರಿ ಹಾಗೂ ಕರು ಸಾವು

257

ಪ್ರಜಾಸ್ತ್ರ ಸುದ್ದಿ

ತುಮಕೂರು: ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅನಾಹುತದಿಂದ ಮೂಕ ಪ್ರಾಣಿಗಳು ಬಲಿಯಾದ ಘಟನೆ ಚಿಕ್ಕನಾಯಕನಹಳ್ಳಿಯ ಮಾದಾಪುರ ಗ್ರಾಮದಲ್ಲಿ ನಡೆದಿದೆ. ಎರಡು ಹೋರಿ ಹಾಗೂ ಒಂದು ಕರು ಸಾವನ್ನಪ್ಪಿದೆ. ಇದೆ ವೇಳೆ ಒಂದು ಟಿವಿಎಸ್ ಎಕ್ಸ್ ಎಲ್ ಸುಟ್ಟು ಹೋಗಿದೆ.

ಪರಮೇಶ ಎಂಬುವವರ ದನದ ಕೊಠಡಿಗೆ ಆಕಸ್ಮಿಕ ಬೆಂಕಿ ತಗುಲಿ ಇಷ್ಟೆಲ್ಲ ಅನಾಹುತ ನಡೆದಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಹಂದನಕೆರೆ ಪೊಲೀಸ್ ಠಾಣಾಧಿಕಾರಿ ಶಿವಪ್ಪ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!