ಪ್ರಜಾಸ್ತ್ರ ಸುದ್ದಿ
ಉಳ್ಳಾಲ: ಬ್ಯಾಟರಿ ಅಂಗಡಿಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ತೊಕ್ಕೊಟ್ಟು ಸೇತುವೆ ಬಳಿ ಭರತ ಎಂಬುವರಿಗೆ ಸೇರಿದ ಅಂಗಡಿಯಲ್ಲಿ ಸೋಮವಾರ ಬೆಂಕಿ ಅನಾಹುತ ಸಂಭವಿಸಿದೆ.
ಸ್ಥಳೀಯರು ನೀರು ಎರಚಿ ಬೆಂಕಿ ನಂದಿಸಲು ನೋಡಿದ್ರು. ಆಗ್ಲಿಲ್ಲ. ಹೀಗಾಗಿ ಅಗ್ನಿ ಶಾಮಕ ಸಿಬ್ಬಂದಿಗೆ ತಿಳಿಸಲಾಯ್ತು. ಅವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ರು.