ದೆಹಲಿ ಬೆಂಕಿ ದುರಂತಕ್ಕೆ 30 ಮಂದಿ ಬಲಿ

344

ನವದೆಹಲಿ: ಇಂದು ಮುಂಜಾನೆ ಸಂಭವಿಸಿದ ಬೆಂಕಿ ಅನಾಹುತಕ್ಕೆ ಸುಮಾರು 30 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ದೆಹಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಕಾರ್ಖಾನೆಯಲ್ಲಿ ಈ ಒಂದು ದುರಂತ ಸಂಭವಿಸಿದೆ.

ಅಗ್ನಿ ದುರಂತ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ರಕ್ಷಣಾ ತಂಡ 20ಕ್ಕೂ ಹೆಚ್ಚು ಜನರನ್ನ ರಕ್ಷಣೆ ಮಾಡಿದ್ದಾರೆ. 50ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸುವ ಕೆಲಸ ಭರದಿಂದ ಸಾಗಿದೆ. ಅಗ್ನಿಶಾಮಕದಳದ ಉಪ ಮುಖ್ಯಾಧಿಕಾರಿ ಸುನೀಲ ಚೌಧರಿ 600 ಚದರ ಅಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ ಅಂತಾ ತಿಳಿಸಿದ್ದಾರೆ.

ಶಾಲಾ ಬ್ಯಾಗ್, ಬಾಟಲ್ ಸೇರಿದಂತೆ ಇತರೆ ವಸ್ತುಗಳನ್ನ ತಯಾರಿಸುವ ಕಾರ್ಖಾನೆಯಾಗಿದೆ. ಕಾರ್ಮಿಕರು ಇಲ್ಲಿಯೇ ಮಲಗಿದ್ದ ಪರಿಣಾಮ ಇಷ್ಟೊಂದು ಪ್ರಮಾಣದ ಸಾವು ನೋವು ಸಂಭವಿಸಿದೆ ಅಂತಾ ಹೇಳಲಾಗ್ತಿದೆ. ಸದ್ಯ ಬೆಂಕಿಯನ್ನ ಸಂಪೂರ್ಣವಾಗಿ ನಂದಿಸಿದ್ದು ರಕ್ಷಣಾ ಕಾರ್ಯ ಮುಂದುವರೆದಿದೆ ಅಂತಾ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!