ಪ್ರಜಾಸ್ತ್ರ ಸುದ್ದಿ
ಮುಂಬೈ: ಇಂದು ಬೆಳಗ್ಗೆ ಮಹಾರಾಷ್ಟ್ರದ ಫಲ್ಘಾರ್ ಜಿಲ್ಲೆಯ ವಾಸೈನಲ್ಲಿರುವ ವಿಜಯ ವಲ್ಲಭ್ ಆಸ್ಪತ್ರೆಯಲ್ಲಿ ಬೆಂಕಿ ದುರಂತ ಸಂಭವಿಸಿದೆ. ಇದ್ರಿಂದಾಗಿ 13 ಜನ ರೋಗಿಗಳು ಮೃತಪಟ್ಟಿದ್ದಾರೆ. ಅನೇಕರಿಗೆ ಸುಟ್ಟು ಗಾಯಗಳಾಗಿವೆ.
ಐಸಿಯುನಲ್ಲಿದ್ದ ಏರ್ ಕಂಡಿಷನರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ರೋಗಿಗಳಲ್ಲಿ 13 ಜನರು ಮೃತಪಟ್ಟಿದ್ದಾರೆ. ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಬುಧವಾರವಷ್ಟೇ ನಾಸಿಕನ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆಯಾಗಿ 24 ಜನ ರೋಗಿಗಳು ಸಾವನ್ನಪ್ಪಿದ್ದರು. ಇದೀಗ ಮತ್ತೊಂದು ಅನಾಹುತ ಸಂಭವಿಸಿದೆ. ಮೊದ್ಲೇ ಕರೋನಾ ಸೋಂಕಿನಿಂದ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ದುರಂತದ ಮೇಲೆ ದುರಂತ ನಡೆಯುತ್ತಿರುವುದು ನಿಜಕ್ಕೂ ಶೋಚನಿಯ.