ರಾಜ್ಯದಲ್ಲಿಯೂ ಪಟಾಕಿ ನಿಷೇಧ

221

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ 19 ಮಹಾಮಾರಿ ಅಟ್ಟಹಾಸ ಮುಂದುವರೆದಿರುವ ಹಿನ್ನೆಲೆಯಲ್ಲಿ ಈ ಬಾರಿಯ ದೀಪಾವಳಿಯಲ್ಲಿ ಪಟಾಕಿ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರುವುದಾಗಲಿ ಮತ್ತು ಹಚ್ಚುವುದಾಗಲಿ ಮಾಡಬಾರದು. ಪಟಾಕಿ ಹಚ್ಚುವುದಕ್ಕೆ ನಿಷೇಧ ಮಾಡಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಸುತ್ತೋಲೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಈಗಾಗ್ಲೇ ದೆಹಲಿ, ಸಿಕ್ಕಿಂ, ಪಶ್ಚಿಮ ಬಂಗಳಾ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ನಿಷೇಧ ಹೇರಲಾಗಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಪರಿಸರವಾದಿಗಳು, ಬರೀ ಈ ಬಾರಿಯ ದೀಪಾವಳಿಗೆ ಮಾತ್ರವಲ್ಲ. ಸಂಪೂರ್ಣವಾಗಿ ಪಟಾಕಿ ನಿಷೇಧ ಮಾಡುವುದು ಒಳ್ಳೆಯದು ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!