ಪಟಾಕಿ ಘಟಕ ದುರಂತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

618

ಪ್ರಜಾಸ್ತ್ರ ಸುದ್ದಿ

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು 11 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ 9 ಜನರ ಮೃತ ದೇಹಗಳನ್ನ ಹೊರ ತೆಗೆಯಲಾಗಿದೆ. ತಮಿಳುನಾಡಿನ ವಿರುಧುನಲ್ಲಿ ಈ ಘಟನೆ ನಡೆದಿದ್ದು, ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತ ಕುಟುಂಬಗಳಿಗೆ ತಲಾ 2 ಲಕ್ಷ ಘೋಷಣೆ ಮಾಡಿದ್ದಾರೆ.

ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿದ ಪರಿಣಾಮ ಎಲ್ಲೆಡೆ ಬೆಂಕಿ ಆವರಿಸಿಕೊಂಡಿದೆ. ಮೃತ ದೇಹಗಳು ಗುರುತು ಪತ್ತೆಯಾಗದ ರೀತಿಯಲ್ಲಿ ಸುಟ್ಟು ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರಂತದಲ್ಲಿ 22ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡ್ತಿದೆ.




Leave a Reply

Your email address will not be published. Required fields are marked *

error: Content is protected !!