ಪ್ರಜಾಸ್ತ್ರ ಅಪರಾಧ ಸುದ್ದಿ
ಕಲಬುರಗಿ: ಶರಣರ ನಾಡಿನಲ್ಲಿ ದಿನದಿಂದ ದಿನಕ್ಕೆ ಅಪರಾಧ ಕೃತ್ಯಗಳು ಹೆಚ್ಚುತ್ತಿವೆ. ಹಾಡಹಗಲೇ ಕೊಲೆಗಳು ನಡೆಯುತ್ತಿವೆ. ಇದೀಗ ಗುಂಡಿನ ದಾಳಿ ನಡೆದಿದೆ. ನಗರದ ಆಳಂದ ಚೆಕ್ ಪೋಸ್ಟ್ ಹತ್ತಿರ ಫೈರಿಂಗ್ ನಡೆಸಲಾಗಿದೆ. ಇದರಲ್ಲಿ ಓರ್ವ ಗಾಯಗೊಂಡಿದ್ದಾನೆ.
ಚನ್ನವೀರ ಎಂಬಾತ ಹಾಗೂ ಇನ್ನೊಬ್ಬನ ಗುಂಡಿನ ದಾಳಿ ನಡೆಸಲಾಗಿದೆ. ಗಾಯಾಳು ಚನ್ನವೀರನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ಶಂಕಿಸಲಾಗಿದೆ. ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.