ಪ್ರಜಾಸ್ತ್ರ ಅಪರಾಧ ಸುದ್ದಿ
ಸಿಂದಗಿ: ಪಟ್ಟಣದ ಚಿನ್ನದ ಅಂಗಡಿಗೆ ನುಗ್ಗಿದ ಖತರ್ನಾಕ್ ಗ್ಯಾಂಗ್ ವೊಂದು ಗುಂಡಿನ ದಾಳಿ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಪಟ್ಟಣದ ಹಳೆ ಬಜಾರ್ ನಲ್ಲಿರುವ ಊರನ ಮಠದ ಹತ್ತಿರದ ನ್ಯೂ ಚಾಮುಂಡೇಶ್ವರಿ ಜ್ಯೂವೆಲರ್ಸ್ ಅಂಗಡಿಯೊಳಗೆ ನುಗ್ಗಿದ ಖದೀಮರು ಕಂಟ್ರಿ ಪಿಸ್ತೂಲ್ ನಿಂದ ಗುಂಡು ಹಾರಿಸಿದ್ದಾರೆ.
ಘಟನೆಯಲ್ಲಿ ಯಾರಿಗೂ ಯಾವುದೇ ಅನಾಹುತವಾಗಿಲ್ಲ. ಈ ವೇಳೆ ಜನರು ಸೇರಿದ್ದನ್ನು ನೋಡಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾರೆ. ಅವರನ್ನು ಬೆನ್ನು ಹತ್ತಿದ ಜನರು ಇಬ್ಬರನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಇಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಮೂವರು ಎಸ್ಕೇಪ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಕಂಟ್ರಿ ಪಿಸ್ತೂಲ್, ಮೂರು ಜೀವಂತ ಗುಂಡುಗಳು ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ.
ಯಾವುದಿದು ಖತರ್ನಾಕ್ ಗ್ಯಾಂಗ್?
ಆರೋಪಿಗಳ ವಿಚಾರಣೆಯನ್ನು ನಡೆಸಲಾಗಿದ್ದು, ಮಹಾರಾಷ್ಟ್ರ ಮೂಲದವರೆಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಯಾವ ರೀತಿಯಾಗಿ ಪ್ಲಾನ್ ಮಾಡಿದರು. ಜನಸಂದಣಿ ಇರುವ ಜಾಗದಲ್ಲಿ ಇಷ್ಟೊಂದು ರಾಜಾರೋಷವಾಗಿ ಗುಂಡು ಹಾರಿಸಿದ್ದಾರೆ ಎಂದರೆ ಪಕ್ಕಾ ಪ್ಲಾನ್ ಮಾಡಿಕೊಂಡು ಬಂದಿದ್ದರಾ? ಏನು ಇವರ ಹಿನ್ನಲೆ? ಇದಕ್ಕೂ ಮೊದಲು ಯಾವೆಲ್ಲ ಅಪರಾಧಿ ಕೃತ್ಯಗಳಲ್ಲಿ ಭಾಗವಹಿಸಿದ್ದರು ಅನ್ನೋದರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.