ಸಿಲಿಕಾನ್ ಸಿಟಿಯಲ್ಲಿ ಗುಂಡಿನ ಸದ್ದು

372

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇದೀಗ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ನಿನ್ನೆ ತಡರಾತ್ರಿ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ರೌಡಿಶೀಟರ್ ಅಶೋಕ ಅಲಿಯಾಸ್ ಅರ್ಜುನ ಎಂಬಾತನ ಮೇಲೆ ಫೈರಿಂಗ್ ಮಾಡಲಾಗಿದೆ.

ರೌಡಿಶೀಟರ್ ಅಶೋಕ ಎರಡು ದಿನಗಳ ಹಿಂದೆ ಬೆಂಗಳೂರಿನ ಕೆ.ಜಿ ಹಳ್ಳಿ ಠಾಣೆ ವ್ಯಾಪ್ತಿಯ ಮೆಹರ್ ಅಲಿ ಎಂಬುವರ ಮನೆ ಮೇಲೆ ದಾಳಿ ನಡೆಸಿ ದರೋಡೆ ಮಾಡಿ ಪರಾರಿಯಾಗಿದ್ದ. ನಿನ್ನೆ ತಡರಾತ್ರಿ ಆತ ಇರುವ ಕಸ್ತೂರಿ ನಗರಕ್ಕೆ ಹೋದಾಗ ಪೊಲೀಸರ ಮೇಲೆ ಚಾಕೂವಿನಿಂದ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪ್ರಾಣರಕ್ಷಣೆಗಾಗಿ ಬಾಣಸವಾಡಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ವೀರುಪಾಕ್ಷಸ್ವಾಮಿ ಆತನ ಮೇಲೆ ಫೈರಿಂಗ್ ಮಾಡಿದ್ದಾರೆ. ಬಳಿಕ ಆತನನ್ನ ವಶಕ್ಕೆ ಪಡೆದು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.


TAG


Leave a Reply

Your email address will not be published. Required fields are marked *

error: Content is protected !!